Quoteರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಲ್ಲಿ ಐದು ʻವಂದೇ ಭಾರತ್ ಎಕ್ಸ್‌ಪ್ರೆಸ್ʼ ರೈಲುಗಳಿಗೆ ಹಸಿರು ನಿಶಾನೆ ತೋರಲಿರುವ ಪ್ರಧಾನಿ
Quoteಭೋಪಾಲ್‌ (ರಾಣಿ ಕಮಲಾಪತಿ)-ಇಂದೋರ್‌, ಭೋಪಾಲ್‌ (ರಾಣಿ ಕಮಲಾಪತಿ)-ಜಬಲ್‌ಪುರ, ರಾಂಚಿ-ಪಾಟ್ನಾ, ಧಾರವಾಡ-ಬೆಂಗಳೂರು ಮತ್ತು ಗೋವಾ(ಮಡಗಾಂವ್‌)-ಮುಂಬೈ ನಡುವೆ ʻವಂದೇ ಭಾರತ್‌ ಎಕ್ಸ್‌ಪ್ರೆಸ್‌ʼ ರೈಲು ಪರಿಚಯಿಸಲಾಗುವುದು
Quoteಗೋವಾ, ಬಿಹಾರ ಮತ್ತು ಜಾರ್ಖಂಡ್‌ಗೆ ಮೊದಲ ಬಾರಿಗೆ ʻವಂದೇ ಭಾರತ್ʼ ರೈಲು ಸಂಪರ್ಕ
Quoteಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಜೂನ್ 27ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಜೂನ್ 27ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 10:30ಕ್ಕೆ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣಕ್ಕೆ ತಲುಪಲಿರುವ ಪ್ರಧಾನಿ, ಐದು `ವಂದೇ ಭಾರತ್’ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಆ ಐದು ʻವಂದೇ ಭಾರತ್ʼ ರೈಲುಗಳೆಂದರೆ: ʻಭೋಪಾಲ್‌(ರಾಣಿ ಕಮಲಾಪತಿ)-ಇಂದೋರ್‌ ವಂದೇ ಭಾರತ್‌ ಎಕ್ಸ್‌ಪ್ರೆಸ್‌ʼ; ʻಭೋಪಾಲ್‌-ಜಬಲ್‌ಪುರ ವಂದೇ ಭಾರತ್ ಎಕ್ಸ್‌ಪ್ರೆಸ್‌ʼ; ʻರಾಂಚಿ-ಪಾಟ್ನಾ ವಂದೇ ಭಾರತ್ ಎಕ್ಸ್‌ಪ್ರೆಸ್‌ʼ; ʻಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ʼ; ಮತ್ತು ʻಮಡಗಾಂವ್ (ಗೋವಾ) - ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ʼ.

ʻಭೋಪಾಲ್‌(ರಾಣಿ ಕಮಲಾಪತಿ)-ಇಂದೋರ್‌ ವಂದೇ ಭಾರತ್‌ ಎಕ್ಸ್‌ಪ್ರೆಸ್‌ʼ ರೈಲು ಮಧ್ಯ ಪ್ರದೇಶದ ಪ್ರಮುಖ ನಗರಗಳ ನಡುವೆ ಸುಗಮ ಮತ್ತು ವೇಗದ ಪ್ರಯಾಣಕ್ಕೆ ಅನುವು ಮಾಡುತ್ತದೆ. ಜೊತೆಗೆ ಈ ಭಾಗದ ಸಾಂಸ್ಕೃತಿ, ಧಾರ್ಮಿಕ ಮತ್ತು ಪ್ರವಾಸಿ ತಾಣಗಳ ನಡುವೆ ಸಂಪರ್ಕವನ್ನು ಹೆಚ್ಚಿಸುತ್ತದೆ.

ʻಭೋಪಾಲ್‌-ಜಬಲ್‌ಪುರ ವಂದೇ ಭಾರತ್ ಎಕ್ಸ್‌ಪ್ರೆಸ್‌ʼ ರೈಲು ಮಹಾಕೌಶಲ್ ಪ್ರದೇಶವನ್ನು (ಜಬಲ್‌ಪುರ) ಮಧ್ಯಪ್ರದೇಶದ ಕೇಂದ್ರಭಾಗಕ್ಕೆ(ಭೋಪಾಲ್) ಸಂಪರ್ಕಿಸುತ್ತದೆ. ಅಲ್ಲದೆ, ಈ ಭಾಗದ ಪ್ರವಾಸಿ ಸ್ಥಳಗಳು ಸುಧಾರಿತ ಸಂಪರ್ಕದಿಂದ ಪ್ರಯೋಜನ ಪಡೆಯಲಿವೆ.

ʻರಾಂಚಿ-ಪಾಟ್ನಾ ವಂದೇ ಭಾರತ್ ಎಕ್ಸ್‌ಪ್ರೆಸ್ʼ - ಇದು ಜಾರ್ಖಂಡ್ ಮತ್ತು ಬಿಹಾರಕ್ಕೆ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ʼರೈಲಾಲಿದೆ. ಪಾಟ್ನಾ ಮತ್ತು ರಾಂಚಿ ನಡುವಿನ ಸಂಪರ್ಕವನ್ನು ಹೆಚ್ಚಿಸುವ ಈ ರೈಲು ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ಉದ್ಯಮಿಗಳಿಗೆ ವರದಾನವಾಗಲಿದೆ.

ʻಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ʼಕರ್ನಾಟಕದ ಪ್ರಮುಖ ನಗರಗಳಾದ ಧಾರವಾಡ, ಹುಬ್ಬಳ್ಳಿ ಮತ್ತು ದಾವಣಗೆರೆಯನ್ನು ರಾಜ್ಯದ ರಾಜಧಾನಿ ಬೆಂಗಳೂರಿನೊಂದಿಗೆ ಸಂಪರ್ಕಿಸುತ್ತದೆ. ಇದು ಈ ಪ್ರದೇಶದ ಪ್ರವಾಸಿಗರು, ವಿದ್ಯಾರ್ಥಿಗಳು, ಕೈಗಾರಿಕೋದ್ಯಮಿಗಳು ಮುಂತಾದವರಿಗೆಅಪಾರ ಪ್ರಯೋಜನವನ್ನು ನೀಡುತ್ತದೆ.

ʻಮಡಗಾಂವ್ (ಗೋವಾ) -ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್‌ʼ- ಇದು ಗೋವಾದ ಮೊದಲ ʻವಂದೇ ಭಾರತ್ ಎಕ್ಸ್‌ಪ್ರೆಸ್ʼರೈಲಾಗಿದೆ. ಇದು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಮತ್ತು ಗೋವಾದ ಮಡಗಾಂವ್ ನಿಲ್ದಾಣದ ನಡುವೆ ಚಲಿಸುತ್ತದೆ. ಇದು ಗೋವಾ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತದೆ.

 

  • Dipanjoy shil December 27, 2023

    bharat Mata ki Jay🇮🇳
  • Santhoshpriyan E October 01, 2023

    Jai hind
  • Dr Sudhanshu Dutt Sharma July 20, 2023

    मुझे गर्व है कि मैंने मोदी युग में जन्म लिया। आपकी कड़ी मेहनत और देश के लिए समर्पण एक मिसाल है ।आप का को युगों युगों तक याद किया जायेगा। जय श्री राम🚩🚩🚩🚩
  • Sundar lal jatav July 11, 2023

    माननीय परम श्रद्धेय प्रधानमंत्री जी का स्वागत वंदन अभिनंदन है 🙏🌹
  • seema mishra July 07, 2023

    जय जय श्री राम
  • MLA KUMAR AILANI July 04, 2023

    जय श्री राम
  • Ranoj Pegu July 01, 2023

    Namo Namo
  • Manisha Pathak June 30, 2023

    माननीय प्रधानमंत्री जी का स्वागत वंदन अभिनंदन है 💐💐
  • વીભાભાઈ ડવ June 29, 2023

    NAMO NAMO
  • VenkataRamakrishna June 28, 2023

    జై శ్రీ రామ్
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India's first microbiological nanosat, developed by students, to find ways to keep astronauts healthy

Media Coverage

India's first microbiological nanosat, developed by students, to find ways to keep astronauts healthy
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 20 ಫೆಬ್ರವರಿ 2025
February 20, 2025

Citizens Appreciate PM Modi's Effort to Foster Innovation and Economic Opportunity Nationwide