Quote“ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವುದು ಮತ್ತು ಅವರನ್ನು ಸಬಲೀಕರಣಗೊಳಿಸುವುದು ಸರ್ಕಾರದ ಗುರಿ”
Quote“ಮೂಲಸೌಕರ್ಯದ ಮಹತ್ವವನ್ನು ನಾವು ಅರಿತಿದ್ದು, ಸೂಕ್ತ ಪ್ರಮಾಣ ಮತ್ತು ವೇಗದ ಮೂಲಕ ಆಧುನಿಕ ಭಾರತ ನಿರ್ಮಾಣ”
Quote“ನಮ್ಮ ಚಿಂತನೆಯು ವಿಘಟಿತವಾಗಿಲ್ಲ, ನಾವು ಸಾಂಕೇತಿಕ ಧೋರಣೆಯನ್ನು ನಂಬುವುದಿಲ್ಲ”
Quote“ನಾವು ನಾಗರಿಕರನ್ನು ಸಬಲೀಕರಣಗೊಳಿಸಲು ತಂತ್ರಜ್ಞಾವನ್ನು ಬಳಸುತ್ತಿದ್ದೇವೆ ಮತ್ತು ನಾವು ಯಶಸ್ವಿಯಾಗಿದ್ದೇವೆ”
Quote“ಡಿಜಿಟಲ್ ಇಂಡಿಯಾ ಯಶಸ್ವಿಯಾಗಿದ್ದು, ಇಡೀ ಜಗತ್ತಿನ ಗಮನ ಸೆಳೆದಿದೆ”
Quote“ನಾವು ರಾಷ್ಟ್ರೀಯ ಪ್ರಗತಿಯನ್ನು ಕೇಂದ್ರೀಕರಿಸಿದ್ದೇವೆ ಮತ್ತು ಪ್ರಾದೇಶಿಕ ಮಹತ್ವಾಕಾಂಕ್ಷೆಗಳಿಗೆ ಗಮನ ಹರಿಸಿದ್ದೇವೆ”
Quote“2047 ರ ವೇಳೆಗೆ ಭಾರತ “ಅಭಿವೃದ್ದಿ ಹೊಂದಿದ ಭಾರತ” ಆಗುವುದು ನಮ್ಮ ಸಂಕಲ್ಪವಾಗಿದೆ”

ಸಂಸತ್ತಿನಲ್ಲಿ ರಾಷ್ಟ್ರಪತಿಯವರು ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿ ಶ‍್ರೀ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಉತ್ತರ ನೀಡಿದರು.  “ಅಭಿವೃದ್ದಿ ಹೊಂದಿದ ಭಾರತ”ದ ದೃಷ್ಟಿಕೋನವನ್ನು ರಾಷ್ಟ್ರಪತಿ ಜೀ ಅವರು ತಮ್ಮ ಭಾಷಣದಲ್ಲಿ ಪ್ರತಿಬಿಂಬಿಸಿದ್ದು, ಅದಕ್ಕಾಗಿ ಪ್ರಧಾನಮಂತ್ರಿ ಅವರು ಧನ್ಯವಾದಗಳನ್ನು ಸಲ್ಲಿಸಿದರು.  

“ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಿಸುವುದು ಮತ್ತು ಅವರನ್ನು ಸಬಲೀಕರಣಗೊಳಿಸುವುದು ಸರ್ಕಾರದ ಗುರಿ” ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಈ ಹಿಂದಿನ ಸಮಯದಲ್ಲಿ ವಿರೋಧಿಸುತ್ತಿದ್ದ ವಿಚಾರವನ್ನು ಪ್ರಸ್ತಾಪಿಸಿದ ಪ್ರಧಾನಮಂತ್ರಿ ಅವರು, ಜನರ ಸಮಸ್ಯೆಗಳಿಗೆ ಪರಿಹಾರ ದೊರಕಿಸುವುದು ಹಿಂದಿನ ಸಮಯದಲ್ಲಿ ಸರ್ಕಾರದ ಜವಾಬ್ದಾರಿಯಾಗಿತ್ತು, ಅವರು ವಿಭಿನ್ನ ಆದ್ಯತೆಗಳು ಮತ್ತು ಉದ್ದೇಶಗಳನ್ನು ಹೊಂದಿದ್ದರು. “ನಾವಿಂದು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಸಾಗಿದ್ದೇವೆ” ಎಂದು ಹೇಳಿದರು. ನೀರಿನ ವಿಷಯವನ್ನು ಪ್ರಧಾನಮಂತ್ರಿ ಅವರು ಉದಾಹರಣೆಯಾಗಿ ನೀಡಿದರು ಮತ್ತು ಸಾಂಕೇತಿಕ ಧೋರಣೆ ಬದಲಿಗೆ ನೀರಿನ ಮೂಲ ಸೌಕರ್ಯ, ಜಲ ಆಡಳಿತ, ಗುಣಮಟ್ಟದ ನಿಯಂತ್ರಣ, ಜಲ ಸಂರಕ್ಷಣೆ ಮತ್ತು ನೀರಾವರಿಯಲ್ಲಿ ನಾವೀನ್ಯತೆಯನ್ನು ಅಳವಡಿಸಿಕೊಂಡಿದ್ದೇವೆ” ಎಂದು ಹೇಳಿದರು. ಇದೇ ರೀತಿ ಹಣಕಾಸು ಒಳಗೊಳ್ಳುವಿಕೆ, ಜನ್ ಧನ್ – ಆಧಾರ್ – ಮೊಬೈಲ್ ಮೂಲಕ ಡಿಬಿಟಿ ಅಳವಡಿಸಿಕೊಂಡಿದ್ದೇವೆ ಮತ್ತು ಗತಿಶಕ್ತಿ ಮೇರು ಯೋಜನೆ ಮೂಲಕ ಮೂಲ ಸೌಕರ್ಯ ಯೋಜನೆಯನ್ನು ಜಾರಿಗೊಳಿಸಿದ್ದೇವೆ ಎಂದರು.

“ಸೌಕರ್ಯದ ಮಹತ್ವವನ್ನು ನಾವು ಅರಿತಿದ್ದು, ಸೂಕ್ತ ಪ್ರಮಾಣ ಮತ್ತು ವೇಗದ ಮೂಲಕ ಆಧುನಿಕ ಭಾರತ ನಿರ್ಮಾಣ” ಮಾಡುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ದೇಶದಲ್ಲಿ ದುಡಿಯುವ ಸಂಸ್ಕೃತಿ ಬದಲಾಗಿದೆ ಎಂದು ಒತ್ತಿ ಹೇಳಿದ ಅವರು, ತಂತ್ರಜ್ಞಾನದ ಶಕ್ತಿ ಮತ್ತು ಆಡಳಿತದ ವೇಗ ಹಾಗೂ ಪ್ರಮಾಣವನ್ನು ಹೆಚ್ಚಿಸಲು ಸರ್ಕಾರ ತನ್ನ ಗಮನವನ್ನು ಕೇಂದ್ರೀಕರಿಸಿಕೊಂಡಿದೆ ಎಂದರು.  

“ಮಹಾತ್ವಾ ಗಾಂಧಿ ಅವರು ‘ಶ್ರೇಯ್’ [ಅರ್ಹತೆ] ಮತ್ತು ‘ಪ್ರಿಯ್’ [ಪ್ರೀತಿ] ಬಗ್ಗೆ ಹೇಳುತ್ತಿದ್ದರು. ನಾವು ‘ಶ್ರೇಯ್’ [ಅರ್ಹತೆ] ಮಾರ್ಗವನ್ನು ಆಯ್ಕೆಮಾಡಿಕೊಂಡಿದ್ದೇವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಸರ್ಕಾರ ಆಯ್ಕೆ ಮಾಡಿಕೊಂಡಿರುವ ಮಾರ್ಗ ವಿಶ್ರಾಂತಿಗೆ ಆದ್ಯತೆ ನೀಡುವ ಮಾರ್ಗವಲ್ಲ. ಆದರೆ ಸಾಮಾನ್ಯ ಜನರ ಆಶೋತ್ತರಗಳನ್ನು ಈಡೇರಿಸಲು ನಾವು ಹಗಲಿರುಳು ಶ್ರಮಿಸುವ ಮಾರ್ಗವನ್ನು ಅನುಸರಿಸಿದ್ದೇವೆ ಎಂದು ಪ್ರಧಾನಮಂತ್ರಿ ಅವರು ಒತ್ತಿ ಹೇಳಿದರು.   

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಮೃತ ಕಾಲದಲ್ಲಿ ಶುದ್ಧತ್ವವನ್ನು ಸಾಧಿಸುವ ಮಹತ್ವದ ಹೆಜ್ಜೆಯನ್ನು ಸರ್ಕಾರ ಇಟ್ಟಿದೆ ಎಂದು ಪ್ರಧಾನಮಂತ್ರಿ ಅವರು ವಿಶೇಷವಾಗಿ ಬೆಳಕು ಚೆಲ್ಲಿದರು. ದೇಶದ ಪ್ರತಿಯೊಬ್ಬ ಫಲಾನುಭವಿಗೆ ಶೇ 100 ರಷ್ಟು ಸೌಲಭ್ಯಗಳನ್ನು ತಲುಪಿಸಲು ಸರ್ಕಾರ ಪ್ರಯತ್ನಶೀಲವಾಗಿದೆ ಎಂದು ಪುನರುಚ್ಚರಿಸಿದರು. “ಇದು ನಿಜವಾದ ಜಾತ್ಯತೀತತೆ, ಇದು ತಾರತಮ್ಯ ಮತ್ತು ಭ್ರಷ್ಟಾಚಾರವನ್ನು ತೊಡೆದುಹಾಕುತ್ತದೆ” ಎಂದು ಪ್ರಧಾನಮಂತ್ರಿ ಅವರು ಹೇಳಿದರು.   

“ದಶಕಗಳಿಂದ ಬುಡಕಟ್ಟು ಸಮುದಾಯದ ಅಭಿವೃದ‍್ದಿಯನ್ನು ನಿರ್ಲಕ್ಷಿಸಲಾಗಿತ್ತು” ನಾವು ಇವರ ಕಲ್ಯಾಣಕ್ಕಾಗಿ ಪ್ರಧಾನ ಆದ್ಯತೆ ನೀಡಿದ್ದೇವೆ.” ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಕಾಲದಲ್ಲಿ ಪ್ರತ್ಯೇಕ ಬುಡಕಟ್ಟು ಕಲ್ಯಾಣ ಸಚಿವಾಲಯವನ್ನು ಸೃಜಿಸಲಾಗಿತ್ತು ಮತ್ತು ಬುಡಕಟ್ಟು ಕಲ್ಯಾಣಕ್ಕಾಗಿ ತಳಮಟ್ಟದ ಪ್ರಯತ್ನಗಳನ್ನು ಸಹ ಕೈಗೊಳ್ಳಲಾಗಿತ್ತು ಎಂದರು.  

“ಭಾರತದ ಕೃಷಿ ವಲಯಕ್ಕೆ ಸಣ್ಣ ರೈತರು ಬೆನ್ನೆಲುಬಾಗಿದ್ದಾರೆ ನಾವು ಅವರ ಕೈ ಬಲಪಡಿಸಲು ಕೆಲಸ ಮಾಡುತ್ತಿದ್ದೇವೆ” ಎಂದು ಪ್ರಧಾನಮಂತ್ರಿ ಅವರು ಒತ್ತಿ ಹೇಳಿದರು. ಪ್ರಸ್ತುತ ಸರ್ಕಾರ ಅವರ ಅಗತ್ಯಗಳ ಮೇಲೆ ಕೇಂದ್ರೀಕರಿಸಿದೆ ಮತ್ತು ಸಣ್ಣ ರೈತರು, ಸಣ್ಣ ಮಾರಾಟಗಾರರು ಮತ್ತು ಕುಶಲಕರ್ಮಿಗಳಿಗೆ ಹಲವಾರು ಅವಕಾಶಗಳನ್ನು ಸೃಷ್ಟಿಸಿದೆ. ಮಹಿಳಾ ಸಬಲೀಕರಣಕ್ಕಾಗಿ ನಾವು ವಿಸ್ತೃತವಾದ ಹೆಜ್ಜೆ ಇರಿಸಿದ್ದು, ಸರ್ಕಾರದ ಕ್ರಮಗಳು ಅವರ ಘನತೆ ಹೆಚ್ಚಿಸುವ ಮತ್ತು ಭಾರತದಲ್ಲಿ ಮಹಿಳೆಯರು ಪ್ರತಿಯೊಂದು ಹಂತದಲ್ಲಿ ಸುಗಮ ಜೀವನ ನಡೆಸುವಂತಹ ವಾತಾವರಣವನ್ನು ಸೃಜಿಸುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.

“ನಮ್ಮ ವಿಜ್ಞಾನಿಗಳು ಮತ್ತು ನಾವೀನ್ಯತೆಯ ತಜ್ಞರಿಂದ ಭಾರತ ಜಗತ್ತಿನ ಔಷಧ ವಲಯದ ತಾಣವಾಗಿದೆ” ದುರದೃಷ್ಟವೆಂದರೆ ಕೆಲವು ಜನ ಭಾರತದ ವಿಜ್ಞಾನಿಗಳು, ನಾವೀನ್ಯತೆ ಹೊಂದಿರುವವರು ಮತ್ತು ಲಸಿಕೆ ಉತ್ಪಾದಕರನ್ನು ಕಡೆಗಣಿಸಿತು  ಎಂದರು. ಅಟಲ್ ಇನೋವೇಶನ್ ಮಿಷನ್ ಮತ್ತು ಟಿಂಕರಿಂಗ್ ಲ್ಯಾಬ್ ನಂತಹ ಕ್ರಮಗಳ ಮೂಲಕ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸುವ ಕುರಿತು ಪ್ರಧಾನಮಂತ್ರಿ ಅವರು ಮಾತನಾಡಿದರು. ಸರ್ಕಾರ ಸೃಜಿಸಿರುವ ಅವಕಾಶಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳುವ ಮೂಲಕ ಖಾಸಗಿ ಉಪಗ್ರಹಗಳನ್ನು ಉಡಾವಣೆ ಮಾಡುತ್ತಿರುವ ಯುವ ಸಮೂಹ ಮತ್ತು ವಿಜ್ಞಾನಿಗಳನ್ನು ಶ‍್ಲಾಘಿಸಿದರು. “ನಾವು ಸಾಮಾನ್ಯ ನಾಗರಿಕರನ್ನು ಸಬಲೀಕರಣಗೊಳಿಸಲು ತಂತ್ರಜ್ಞಾನ ವನ್ನು ಬಳಸುತ್ತಿದ್ದೇವೆ ಮತ್ತು ಯಶಸ್ವಿಯಾಗಿದ್ದೇವೆ” ಎಂದು ಹೇಳಿದರು.    

“ಡಿಜಿಟಲ್ ವಹಿವಾಟಿನಲ್ಲಿ ಭಾರತ ಜಗತ್ತಿನ ನಾಯಕನಾಗಿದೆ. ಡಿಜಿಟಲ್ ಇಂಡಿಯಾದ ಯಶಸ್ಸು ಇಡೀ ಜಗತ್ತಿನ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.” ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಭಾರತ ಮೊಬೈಲ್ ಫೋನ್ ಗಳನ್ನು ಆಮದು ಮಾಡಿಕೊಳ್ಳುತ್ತಿದ್ದ ಸಮಯವನ್ನು ಸ್ಮರಿಸಿಕೊಂಡರು, ಆದರೆ ಇಂದು ನಾವು ಮೊಬೈಲ್ ಫೋನ್ ಗಳನ್ನು ಇತರೆ ದೇಶಗಳಿಗೆ ರಫ್ತು ಮಾಡುತ್ತಿರುವುದಕ್ಕೆ ಹೆಮ್ಮೆಪಡುತ್ತವೆ ಎಂದರು.  

 “2047 ರ ವೇಳೆಗೆ ಭಾರತ “ಅಭಿವೃದ್ಧಿ ಹೊಂದಿದ ಭಾರತ” ಆಗುವುದು ನಮ್ಮ ಸಂಕಲ್ಪವಾಗಿದೆ” ಎಂದು ಪ್ರಧಾನಮಂತ್ರಿ ಅವರು ಹೇಳಿದರು. ನಾವು ಎದುರು ನೋಡುತ್ತಿದ್ದ ಅವಕಾಶಗಳನ್ನು ಪಡೆದುಕೊಳ್ಳಲು ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ ಎಂದು ಪುನರುಚ್ಚರಿಸಿದರು. “ಭಾರತ ದೈತ್ಯ ಜಿಗಿತಕ್ಕೆ ಸನ್ನದ್ಧವಾಗಿದೆ ಮತ್ತು ಭವಿಷ್ಯದಲ್ಲಿ ಹಿಂದೆ ತಿರುಗಿ ನೋಡುವುದಿಲ್ಲ” ಎಂದು ಪ್ರಧಾನಮತ್ರಿ ಅವರು ತಮ್ಮ ಉತ್ತರವನ್ನು ಕೊನೆಗೊಳಿಸಿದರು.

 

 

 

 

 

 

 

 

 

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

  • Jitendra Kumar June 05, 2025

    🙏🙏🙏🙏
  • Babla sengupta May 01, 2025

    Babla sengupta.
  • krishangopal sharma Bjp December 18, 2024

    नमो नमो 🙏 जय भाजपा 🙏🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩
  • krishangopal sharma Bjp December 18, 2024

    नमो नमो 🙏 जय भाजपा 🙏🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩
  • krishangopal sharma Bjp December 18, 2024

    नमो नमो 🙏 जय भाजपा 🙏🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩🚩
  • Reena chaurasia August 29, 2024

    बीजेपी
  • Babla sengupta December 28, 2023

    Babla sengupta
  • mr_rana_parshant December 15, 2023

    आदरणीय प्रधानमंत्री जी, आपसे जो सबसे ज्यादा निवेदन है कि इस बात पर ज्यादा ध्यान देना चाहिए कि युवा शक्ति का प्रयोग किस दिशा में और किस प्रकार से हो रहा है। क्योंकि हम सभी जानते हैं की किसी भी देश की मजबूत नींव में उस देश के युवाओं का बहुत अधिक योगदान होता है। युवाओं को सही दिशा न मिल पाने के कारण ही कहीं न कहीं इनका ध्यान गलत चीज़ों जैसे नशे आदि में बढ़ता ही जा रहा है। इस क्षेत्र में कुछ ऐसे नियम बनाए जाने की आवश्यकता है जिनका उल्लंघन करने पर दंड प्रक्रिया हो, तभी नियमों का उचित प्रकार से पालन हो सकता है।
  • Mahendra singh Solanki Loksabha Sansad Dewas Shajapur mp November 02, 2023

    Jay shree Ram
  • Mohan singh Dharmraj March 31, 2023

    🇮🇳 आपकी सरकार का उद्देश्य आपकी नीयत अनुरूप नहीं, इसलिए भृष्टाचार बेलगाम है। देश को आपकी जरूरत है भृष्टाचारियों की नहीं, ये कैसे हो पायेगा सुझाऐं मन की बात मे, क्योंकि मोदी है तो मुमकिन है🚩जय हो भृष्टाचार-जय भाजपा सरकार🚩
Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
11 years of Modi government: The transformation and the road ahead

Media Coverage

11 years of Modi government: The transformation and the road ahead
NM on the go

Nm on the go

Always be the first to hear from the PM. Get the App Now!
...
Prime Minister pays tribute to Bhagwan Birsa Munda
June 09, 2025

The Prime Minister, Shri Narendra Modi paid tributes to great hero of the freedom struggle, Bhagwan Birsa Munda on the occasion of his Martyr's Day today.

The Prime Minister stated that Bhagwan Birsa Munda dedicated his life to the welfare of tribal brothers and sisters and the protection of their rights. He added that his sacrifice and devotion will continue to inspire the people of the country.

The Prime Minister posted on X;

"स्वतंत्रता संग्राम के महानायक भगवान बिरसा मुंडा जी को उनके बलिदान दिवस पर आदरपूर्ण श्रद्धांजलि। आदिवासी भाई-बहनों के कल्याण और उनके अधिकारों की रक्षा के लिए उन्होंने अपना जीवन समर्पित कर दिया। उनका त्याग और समर्पण देशवासियों को सदैव प्रेरित करता रहेगा।"