ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2020ರ ಸೆಪ್ಟೆಂಬರ್ 11ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿ -2020 (ಎನ್.ಇ.ಪಿ. 2020) ಅಡಿಯಲ್ಲಿ "21 ನೇ ಶತಮಾನದಲ್ಲಿ ಶಾಲಾ ಶಿಕ್ಷಣಕುರಿತ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಶಿಕ್ಷಣ ಸಚಿವಾಲಯ ಶಿಕ್ಷಣ ಪರ್ವದ ಅಂಗವಾಗಿ ಸೆಪ್ಟೆಂಬರ್ 10 ಮತ್ತು 11ರಂದು ಈ ಎರಡು ದಿನಗಳ ಸಮಾವೇಶವನ್ನು ಆಯೋಜಿಸಿದೆ.

ಇದಕ್ಕೂ ಮುನ್ನ ಪ್ರಧಾನಿ ಅವರು 2020ರ ಆಗಸ್ಟ್ 7ರಂದು “ಎನ್.ಇ.ಪಿ.-2020 ಅಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಪರಿವರ್ತನಾತ್ಮಕ ಸುಧಾರಣೆ ಸಮಾವೇಶ’ ಉದ್ದೇಶಿಸಿ ಭಾಷಣ ಮಾಡಿದ್ದರು.

ಶ್ರೀ ಮೋದಿ ಸೆಪ್ಟೆಂಬರ್ 7ರಂದು ಎನ್.ಇ.ಪಿ.2020 ಕುರಿತ ರಾಜ್ಯಪಾಲರುಗಳ ಸಮಾವೇಶವನ್ನು ಉದ್ದೇಶಿಸಿಯೂ ಮಾತನಾಡಿದ್ದರು.

ಎನ್.ಇ.ಪಿ.-2020ಯು 21ನೇ ಶತಮಾನದ ಮೊದಲ ಶಿಕ್ಷಣ ನೀತಿಯಾಗಿದ್ದು, 1986ರ ಹಿಂದಿನ ರಾಷ್ಟ್ರೀಯ ಶಿಕ್ಷಣ ನೀತಿಯ 34 ವರ್ಷಗಳ ತರುವಾಯ ಪ್ರಕಟಿಸಲಾಗಿದೆ. ಎನ್.ಇ.ಪಿ. 2020 ಶಾಲಾ ಮತ್ತು ಉನ್ನತ ಶಿಕ್ಷಣಗಳೆರಡರ ಮಟ್ಟದಲ್ಲೂ ಪ್ರಮುಖ ಸುಧಾರಣೆಯನ್ನು ನಿರ್ದೇಶಿಸುತ್ತದೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಭಾರತವನ್ನು ಸಮಾನ ಮತ್ತು ಚಲನಶೀಲ ಜ್ಞಾನ ತಾಣವಾಗಿ ಮಾಡುವ ಉದ್ದೇಶ ಹೊಂದಿದೆ. ಇದು ಭಾರತವನ್ನು ನೇರವಾಗಿ ಜಾಗತಿಕ ಮಹಾನ್ ಶಕ್ತಿಶಾಲಿ ರಾಷ್ಟ್ರವಾಗಿ ಪರಿವರ್ತಿಸಲು ಭಾರತ ಕೇಂದ್ರಿತ ಶಿಕ್ಷಣ ವ್ಯವಸ್ಥೆಯನ್ನು ಒದಗಿಸುತ್ತದೆ.

ಎನ್.ಇ.ಪಿ. 2020 ದೇಶದ ಶಾಲಾ ಶಿಕ್ಷಣದಲ್ಲಿ ದೊಡ್ಡ ಸುಧಾರಣೆ ತರಲಿದೆ. ಶಾಲಾ ಮಟ್ಟದಲ್ಲಿ 8 ವರ್ಷ ವಯಸ್ಸಿನ ಮಕ್ಕಳಿಗೆ ಬಾಲ್ಯದ ಆರೈಕೆಯ ಸಾರ್ವತ್ರೀಕರಣ ಮತ್ತು ಶಿಕ್ಷಣ (ಇಸಿಸಿಇ) ಗೆ ಒತ್ತು ನೀಡಲಾಗುತ್ತದೆ; ಶಾಲಾ ಪಠ್ಯಕ್ರಮದ ವಿನ್ಯಾಸವನ್ನು 10+2 ಬದಲಾಗಿ 5+3+3+4 ಪಠ್ಯಕ್ರಮದ ರಚನೆಯೊಂದಿಗೆ ಬದಲಾಯಿಸಲಾಗುತ್ತದೆ; ಪಠ್ಯಕ್ರಮವನ್ನು 21 ನೇ ಶತಮಾನದ ಕೌಶಲ್ಯಗಳು, ಗಣಿತದ ಚಿಂತನೆ ಮತ್ತು ವೈಜ್ಞಾನಿಕ ಮನೋಭಾವಕ್ಕೆ ಸಂಯೋಜಿಸಲಾಗಿದೆ; ಶಾಲಾ ಶಿಕ್ಷಣಕ್ಕಾಗಿ ಹೊಸ ಸಮಗ್ರ ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟಿನ ಅಭಿವೃದ್ಧಿ; ಶಿಕ್ಷಕರಿಗೆ ರಾಷ್ಟ್ರೀಯ ವೃತ್ತಿಪರ ಮಾನದಂಡಗಳು; ಮೌಲ್ಯಮಾಪನ ಸುಧಾರಣೆಗಳು ಮತ್ತು ಮಗುವಿನ ಸಮಗ್ರ ಪ್ರಗತಿ ಕಾರ್ಡ್; ಮತ್ತು 6 ನೇ ತರಗತಿಯಿಂದ ವೃತ್ತಿಪರತೆಯ ಕ್ರೋಡೀಕರಣಕ್ಕೆ ಒತ್ತು ನೀಡಲಾಗಿದೆ.

ಎನ್.ಇಪಿಯಲ್ಲಿ ಉದ್ದೇಶಿಸಿರುವ ಸಮಗ್ರ ಪರಿವರ್ತನೆಯು ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಒಂದು ಮಾದರಿ ಬದಲಾವಣೆಯನ್ನು ತರುತ್ತದೆ ಮತ್ತು ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಯವರ ಹೊಸ ಆತ್ಮನಿರ್ಭರ ಭಾರತಕ್ಕೆ ಸಕ್ರಿಯ ಮತ್ತು ಪುನಶ್ಚೇತನಗೊಂಡ ಶೈಕ್ಷಣಿಕ ಪರಿಸರ ವ್ಯವಸ್ಥೆಯನ್ನು ರೂಪಿಸುತ್ತದೆ.

ಶಿಕ್ಷಕರನ್ನು ಸನ್ಮಾನಿಸಲು ಮತ್ತು ಹೊಸ ಶಿಕ್ಷಣ ನೀತಿ 2020 ಅನ್ನು ಮುಂದೆ ತೆಗೆದುಕೊಂಡು ಸಾಗಲು 2020ರ ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 25 ರವರೆಗೆ ಶಿಕ್ಷಕ ಪರ್ವ ಆಚರಿಸಲಾಗುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020ರ ವಿವಿಧ ಅಂಶಗಳ ಕುರಿತು ವಿವಿಧ ವೆಬಿನಾರ್‌ ಗಳು, ವರ್ಚುವಲ್ ಸಮ್ಮೇಳನಗಳು ಮತ್ತು ಸಮಾವೇಶಗಳನ್ನು ದೇಶಾದ್ಯಂತ ಆಯೋಜಿಸಲಾಗುತ್ತಿದೆ.

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
'India Delivers': UN Climate Chief Simon Stiell Hails India As A 'Solar Superpower'

Media Coverage

'India Delivers': UN Climate Chief Simon Stiell Hails India As A 'Solar Superpower'
NM on the go

Nm on the go

Always be the first to hear from the PM. Get the App Now!
...
PM Modi condoles loss of lives due to stampede at New Delhi Railway Station
February 16, 2025

The Prime Minister, Shri Narendra Modi has condoled the loss of lives due to stampede at New Delhi Railway Station. Shri Modi also wished a speedy recovery for the injured.

In a X post, the Prime Minister said;

“Distressed by the stampede at New Delhi Railway Station. My thoughts are with all those who have lost their loved ones. I pray that the injured have a speedy recovery. The authorities are assisting all those who have been affected by this stampede.”