ಈಶಾನ್ಯ ವಲಯದ ಬುಡಕಟ್ಟು ಉತ್ಪನ್ನಗಳ ಉತ್ತೇಜನಕ್ಕಾಗಿ ಮಾರುಕಟ್ಟೆ ಮತ್ತು ಲಾಜಿಸ್ಟಿಕ್ಸ್ ಅಭಿವೃದ್ಧಿ (ಪಿಟಿಪಿ-ಎನ್ಇಆರ್) ಒಂದು ಉತ್ತಮ ಯೋಜನೆಯಾಗಿದ್ದು, ಈಶಾನ್ಯಕ್ಕೆ ಸೇರಿದ ಪ್ರತಿಭಾವಂತ ಕುಶಲಕರ್ಮಿಗಳ ಜೀವನವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಈ ಯೋಜನೆಯು ಈಶಾನ್ಯದ ಉತ್ಪನ್ನಗಳಿಗೆ ಹೆಚ್ಚಿನ ಗೋಚರತೆಯನ್ನು ಖಾತ್ರಿಪಡಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಶ್ರೀ ಅರ್ಜುನ್ ಮುಂಡಾ ಅವರು ಸರಣಿ ಟ್ವೀಟ್ ನಲ್ಲಿ, ಪಿಟಿಪಿ-ಎನ್ ಇಆರ್ ಯೋಜನೆಯ ಉದ್ದೇಶವು ಉತ್ಪನ್ನಗಳ ಸಂಗ್ರಹಣೆ, ಲಾಜಿಸ್ಟಿಕ್ಸ್ ಮತ್ತು ಮಾರುಕಟ್ಟೆಯಲ್ಲಿ ದಕ್ಷತೆಯನ್ನು ಹೆಚ್ಚಿಸುವ ಮೂಲಕ ಬುಡಕಟ್ಟು ಕುಶಲಕರ್ಮಿಗಳಿಗೆ ಜೀವನೋಪಾಯದ ಅವಕಾಶಗಳನ್ನು ಬಲಪಡಿಸುವುದಾಗಿದೆ ಎಂದು ಮಾಹಿತಿ ನೀಡಿದರು.

ಕೇಂದ್ರ ಸಚಿವರ ಸರಣಿ ಟ್ವೀಟ್ ಗೆ ಉತ್ತರವಾಗಿ, ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ;

“ಪಿಟಿಪಿ-ಎನ್ಇಆರ್ ಒಂದು ಉತ್ತಮ ಯೋಜನೆಯಾಗಿದ್ದು, ಈಶಾನ್ಯಕ್ಕೆ ಸೇರಿದ ಪ್ರತಿಭಾವಂತ ಕುಶಲಕರ್ಮಿಗಳ ಜೀವನವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ಇದು ಈಶಾನ್ಯದ ಉತ್ಪನ್ನಗಳಿಗೆ ಉತ್ತಮ ಗೋಚರತೆಯನ್ನು ಖಚಿತಪಡಿಸುತ್ತದೆ. ಇದರಿಂದ ಬುಡಕಟ್ಟು ಸಮುದಾಯಗಳು ವಿಶೇಷವಾಗಿ ಪ್ರಯೋಜನ ಪಡೆಯಲಿವೆ,’’ ಎಂದಿದ್ದಾರೆ.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Govt saved 48 billion kiloWatt of energy per hour by distributing 37 cr LED bulbs

Media Coverage

Govt saved 48 billion kiloWatt of energy per hour by distributing 37 cr LED bulbs
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಮಾರ್ಚ್ 2025
March 12, 2025

Appreciation for PM Modi’s Reforms Powering India’s Global Rise