Quote"ಇಂಧನವು ವ್ಯಕ್ತಿಯಿಂದ ಹಿಡಿದು ರಾಷ್ಟ್ರದ ತನಕ ಎಲ್ಲಾ ಹಂತದ ಅಭಿವೃದ್ಧಿಯ ಮೇಲೆ ಪರಿಣಾಮ ಬೀರುತ್ತದೆ"
Quote"ಭಾರತವು ತನ್ನ ಉರವಲು ರಹಿತ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಗುರಿಯನ್ನು 9 ವರ್ಷ ಮುಂಚಿತವಾಗಿ ಸಾಧಿಸಿದೆ"
Quote"ಎಲ್ಲರನ್ನೂ ಒಳಗೊಂಡ, ಹೊಂದಾಣಿಕೆಯ, ಸಮಾನ ಮತ್ತು ಸುಸ್ಥಿರ ಇಂಧನ ಉತ್ಪಾನೆಗಾಗಿ ಕೆಲಸ ಮಾಡುವುದು ನಮ್ಮ ಪ್ರಯತ್ನವಾಗಿದೆ"
Quote"ಅಂತರ-ಸಂಪರ್ಕಿತ ಹಸಿರು ಗ್ರಿಡ್‌ಗಳ ದೃಷ್ಟಿಯನ್ನು ಅರಿತುಕೊಳ್ಳುವುದರಿಂದ ನಾವೆಲ್ಲರೂ ನಮ್ಮ ಹವಾಮಾನ ಗುರಿಗಳನ್ನು ಸಾಧಿಸಲು, ಹಸಿರು ಹೂಡಿಕೆ ಉತ್ತೇಜಿಸಲು ಮತ್ತು ಲಕ್ಷಾಂತರ ಹಸಿರು ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯವಾಗುತ್ತದೆ"
Quote"ನಮ್ಮ ಆಲೋಚನೆಗಳು ಮತ್ತು ಕಾರ್ಯಗಳು ಯಾವಾಗಲೂ ನಮ್ಮ 'ಒಂದು ಪೃಥ್ವಿ'ಯನ್ನು ಸಂರಕ್ಷಿಸಲು ಸಹಾಯ ಮಾಡಬೇಕು, ನಮ್ಮ 'ಒಂದು ಕುಟುಂಬ'ದ ಹಿತಾಸಕ್ತಿಗಳನ್ನು ರಕ್ಷಿಸಬೇಕು ಮತ್ತು ಹಸಿರು 'ಒಂದು ಭವಿಷ್ಯದ' ಕಡೆಗೆ ಸಾಗಬೇಕು"

ಗೌರವಾನ್ವಿತರೇ, ಮಹಿಳೆಯರೇ ಮತ್ತು ಮಹನೀಯರೇ, ನಿಮಗೆಲ್ಲರಿಗೂ ನಮಸ್ಕಾರ!  ನಾನು ನಿಮ್ಮೆಲ್ಲರನ್ನು ಭಾರತಕ್ಕೆ ಸ್ವಾಗತಿಸುತ್ತೇನೆ.

ಭವಿಷ್ಯದ ಬಗ್ಗೆ ಯಾವುದೇ ಚರ್ಚೆ, ಸುಸ್ಥಿರತೆ ಅಥವಾ ಬೆಳವಣಿಗೆ ಮತ್ತು ಅಭಿವೃದ್ಧಿ ಶಕ್ತಿಯಿಲ್ಲದೆ ಪೂರ್ಣಗೊಳ್ಳುವುದಿಲ್ಲ.  ಇದು ವ್ಯಕ್ತಿಗಳಿಂದ ರಾಷ್ಟ್ರಗಳವರೆಗೆ ಎಲ್ಲಾ ಹಂತಗಳಲ್ಲಿ ಅಭಿವೃದ್ಧಿಯ ಮೇಲೆ ಪರಿಣಾಮ ಬೀರುತ್ತದೆ.

 ಸ್ನೇಹಿತರೇ,


ನಮ್ಮಲ್ಲಿನ ವಿಭಿನ್ನ ನೈಜತೆಗಳನ್ನು ಗಮನಿಸಿದರೆ, ಶಕ್ತಿಯ ಪರಿವರ್ತನೆಗೆ ನಮ್ಮ ಮಾರ್ಗಗಳು ವಿಭಿನ್ನವಾಗಿವೆ. ಆದರೆ, ನಮ್ಮೆಲ್ಲರ ಗುರಿಗಳು ಒಂದೇ ಎಂದು ನಾನು ದೃಢವಾಗಿ ನಂಬುತ್ತೇನೆ.  ಹಸಿರು ಇಂಧನದ ಬೆಳವಣಿಗೆ ಮತ್ತು ಶಕ್ತಿ ಪರಿವರ್ತನೆಯಲ್ಲಿ ಭಾರತವು ಮಹತ್ತರವಾದ ಪ್ರಯತ್ನಗಳನ್ನು ಮಾಡುತ್ತಿದೆ.  ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರ ಮತ್ತು ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯಾಗಿದೆ.  ನಾವು ನಮ್ಮ ಹವಾಮಾನ ಬದ್ಧತೆಗಳ ಮೇಲೆ ಅಚಲವಾಗಿ ಚಲಿಸುತ್ತಿದ್ದೇವೆ.  ಹವಾಮಾನ ಕ್ರಮದಲ್ಲಿ ಭಾರತ ನಾಯಕತ್ವವನ್ನು ತೋರಿಸಿದೆ.  ನಾವು ನಮ್ಮ ಪಳೆಯುಳಿಕೆ ರಹಿತ ವಿದ್ಯುತ್ ಸಾಮರ್ಥ್ಯದ ಗುರಿಯನ್ನು ಒಂಬತ್ತು ವರ್ಷಗಳ ಮುಂಚಿತವಾಗಿಯೇ ಸಾಧಿಸಿದ್ದೇವೆ.  ನಾವು ಈಗ ಹೆಚ್ಚಿನ ಗುರಿಯನ್ನು ಹೊಂದಿದ್ದೇವೆ.  ನಾವು 2030 ರ ವೇಳೆಗೆ ಶೇಕಡಾ 50 ರಷ್ಟು ಪಳೆಯುಳಿಕೆ ರಹಿತ ಸ್ಥಾಪಿತ ಸಾಮರ್ಥ್ಯವನ್ನು ಸಾಧಿಸಲು ಯೋಜಿಸಿದ್ದೇವೆ. ಸೌರ ಮತ್ತು ಪವನ ಶಕ್ತಿಯ ಜಾಗತಿಕ ನಾಯಕರಲ್ಲಿ ಭಾರತವೂ ಸಹ ಇದೆ.  ಜಿ20 ಕಾರ್ಯತಂಡದ ಪ್ರತಿನಿಧಿಗಳು ಪಾವಗಡ ಸೋಲಾರ್ ಪಾರ್ಕ್ ಮತ್ತು ಮೊಧೇರಾ ಸೋಲಾರ್ ಗ್ರಾಮಕ್ಕೆ ಭೇಟಿ ನೀಡಿರುವುದು ಸಂತಸ ತಂದಿದೆ.  ಶುದ್ಧ ಇಂಧನಕ್ಕೆ ಭಾರತದ ಬದ್ಧತೆಯ ಮಟ್ಟ ಮತ್ತು ಪ್ರಮಾಣವನ್ನು ಅವರು ಸನಿಹದಿಂದ ವೀಕ್ಷಿಸಿದ್ದಾರೆ.

 ಸ್ನೇಹಿತರೇ,

ಭಾರತದಲ್ಲಿ, ಕಳೆದ ಒಂಬತ್ತು ವರ್ಷಗಳಲ್ಲಿ ನಾವು 190 ದಶಲಕ್ಷಕ್ಕಿಂತಲೂ ಹೆಚ್ಚು ಕುಟುಂಬಗಳನ್ನು ಎಲ್‌.ಪಿ.ಜಿ.ಯೊಂದಿಗೆ ಸಂಪರ್ಕಿಸಿದ್ದೇವೆ.  ಪ್ರತಿಯೊಂದು ಹಳ್ಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಐತಿಹಾಸಿಕ ಮೈಲಿಗಲ್ಲನ್ನೂ ಸಾಧಿಸಿದ್ದೇವೆ.  ಜನರಿಗೆ ಕೊಳವೆ ಮೂಲಕ ಅಡುಗೆ ಅನಿಲ ನೀಡುವ ಕೆಲಸವನ್ನೂ ಮಾಡುತ್ತಿದ್ದೇವೆ.  ಇದು, ಮುಂದಿನ ಕೆಲವೇ ವರ್ಷಗಳಲ್ಲಿ ಜನಸಂಖ್ಯೆಯ 90 ಪ್ರತಿಶತಕ್ಕಿಂತ ಹೆಚ್ಚು ಜನರನ್ನು ಆವರಿಸುವ ಸಾಮರ್ಥ್ಯವನ್ನು ಹೊಂದಿದೆ.  ಎಲ್ಲರನ್ನೂ ಒಳಗೊಳ್ಳುವ, ಆಧರಿಸಿ ಚೇತರಿಸಿಕೊಳ್ಳುವ, ಸಮಾನವಾದ ಮತ್ತು ಸಮರ್ಥನೀಯ ಶಕ್ತಿಗಾಗಿ ಕೆಲಸ ಮಾಡುವುದು ನಮ್ಮ ಪ್ರಯತ್ನವಾಗಿದೆ.

 ಸ್ನೇಹಿತರೇ,

 ಸಣ್ಣ ಹೆಜ್ಜೆಗಳು ದೊಡ್ಡ ಫಲಿತಾಂಶಗಳಿಗೆ ಕಾರಣವಾಗುತ್ತವೆ.  2015 ರಲ್ಲಿ, ಎಲ್.ಇ.ಡಿ. ದೀಪಗಳ ಬಳಕೆಗಾಗಿ ಯೋಜನೆಯನ್ನು ಪ್ರಾರಂಭಿಸುವ ಮೂಲಕ ನಾವು ಸಣ್ಣ ಚಳುವಳಿಯನ್ನು ಪ್ರಾರಂಭಿಸಿದ್ದೇವೆ.  ಇದು ವಿಶ್ವದ ಅತಿದೊಡ್ಡ ಎಲ್‌.ಇ.ಡಿ ವಿತರಣಾ ಕಾರ್ಯಕ್ರಮವಾಯಿತು, ಇದು ನಮಗೆ ವರ್ಷಕ್ಕೆ 45 ಶತಕೋಟಿ ಯೂನಿಟ್‌ ಗಳಿಗಿಂತ ಹೆಚ್ಚು ವಿದ್ಯುತ್ ಶಕ್ತಿಯನ್ನು ಉಳಿಸುತ್ತದೆ.  ನಾವು ವಿಶ್ವದ ಅತಿದೊಡ್ಡ ಕೃಷಿ ಪಂಪ್ ಸೌರ ಶಕ್ತೀಕರಣ ಉಪಕ್ರಮವನ್ನು ಪ್ರಾರಂಭಿಸಿದ್ದೇವೆ.  ಭಾರತದ ದೇಶೀಯ ವಿದ್ಯುತ್ ಚಾಲಿತ ವಾಹನ ಮಾರುಕಟ್ಟೆಯು 2030 ರ ವೇಳೆಗೆ 10 ದಶಲಕ್ಷ ವಾರ್ಷಿಕ ಮಾರಾಟವನ್ನು ತಲುಪುವ ನಿರೀಕ್ಷೆಯಿದೆ. ನಾವು ಈ ವರ್ಷ 20 ಪ್ರತಿಶತ ಎಥೆನಾಲ್ ಮಿಶ್ರಿತ ಪೆಟ್ರೋಲ್ ಅನ್ನು ಪ್ರಾರಂಭಿಸಿದ್ದೇವೆ.  2025 ರ ವೇಳೆಗೆ ಇಡೀ ದೇಶವನ್ನು ಆವರಿಸುವುದು ನಮ್ಮ ಗುರಿಯಾಗಿದೆ. ಭಾರತವನ್ನು ಅಗಾಲ ರಹಿತ(ಡಿಕಾರ್ಬನೈಸ್) ಮಾಡಲು, ನಾವು ಪರ್ಯಾಯವಾಗಿ ಹಸಿರು ಹೈಡ್ರೋಜನ್‌ ಕುರಿತು ಉಪಕ್ರಮಗಳಲ್ಲಿ ಮಿಷನ್ ಮೋಡ್‌ ನಲ್ಲಿ ಕೆಲಸ ಮಾಡುತ್ತಿದ್ದೇವೆ.  ಹಸಿರು ಹೈಡ್ರೋಜನ್ ಮತ್ತು ಅದರ ಉತ್ಪನ್ನಗಳ ಉತ್ಪಾದನೆ, ಬಳಕೆ ಮತ್ತು ರಫ್ತಿಗೆ ಭಾರತವನ್ನು ಜಾಗತಿಕ ಕೇಂದ್ರವನ್ನಾಗಿ ಮಾಡುವುದು ಗುರಿಯಾಗಿದೆ.  ನಮ್ಮ ಕಲಿಕೆಯನ್ನು ಹಂಚಿಕೊಳ್ಳಲು ನಾವು ಸಂತೋಷಪಡುತ್ತೇವೆ.

ಸ್ನೇಹಿತರೇ,

ಸುಸ್ಥಿರ, ನ್ಯಾಯಯುತ, ಕೈಗೆಟುಕುವ, ಅಂತರ್ಗತ ಮತ್ತು ಶುದ್ಧ ಶಕ್ತಿಯ ಪರಿವರ್ತನೆಯನ್ನು ಮುನ್ನಡೆಸಲು ಜಗತ್ತು ಈ ಜಿ20 ಗುಂಪನ್ನು ಎದುರು ನೋಡುತ್ತಿದೆ. ಇಲ್ಲಿ ಕಾರ್ಯತಂತ್ರ  ಮಾಡುವಾಗ, ಗ್ಲೋಬಲ್ ಸೌತ್‌ ನಲ್ಲಿರುವ ನಮ್ಮ ಸಹೋದರರು ಮತ್ತು ಸಹೋದರಿಯರು ಹಿಂದುಳಿದಿಲ್ಲ ಎಂಬುದು ಮುಖ್ಯವಾಗಿ ಪರಿಗಣಿಸಬೇಕು.  ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಕಡಿಮೆ-ವೆಚ್ಚದ ಹಣಕಾಸು ಒದಗಿಸುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು.  ತಂತ್ರಜ್ಞಾನದ ಅಂತರವನ್ನು ನಿವಾರಿಸಲು, ಶಕ್ತಿಯ ಸುರಕ್ಷತೆಯನ್ನು ಉತ್ತೇಜಿಸಲು ಮತ್ತು ಪೂರೈಕೆ ಸರಪಳಿಗಳನ್ನು ವೈವಿಧ್ಯಗೊಳಿಸಲು ನಾವು ಮಾರ್ಗಗಳನ್ನು ಕಂಡುಕೊಳ್ಳಬೇಕು.  ಮತ್ತು, ನಾವು 'ಭವಿಷ್ಯಕ್ಕಾಗಿ ಇಂಧನಗಳ' ಸಹಯೋಗವನ್ನು ಬಲಪಡಿಸಬೇಕು.  'ಹೈಡ್ರೋಜನ್ ಮೇಲಿನ ಉನ್ನತ ಮಟ್ಟದ ನೀತಿ ತತ್ವಗಳು' ಸರಿಯಾದ ದಿಕ್ಕಿನಲ್ಲಿ ಒಂದು ಹೆಜ್ಜೆಯಾಗಿದೆ.  ಟ್ರಾನ್ಸ್-ನ್ಯಾಷನಲ್ ಗ್ರಿಡ್ ಇಂಟರ್‌ ಕನೆಕ್ಷನ್‌ಗಳು ಇಂಧನ ಭದ್ರತೆಯನ್ನು ಹೆಚ್ಚಿಸಬಹುದು.  ನಾವು ಈ ಪ್ರದೇಶದಲ್ಲಿ ನಮ್ಮ ನೆರೆಹೊರೆಯವರೊಂದಿಗೆ ಈ ಪರಸ್ಪರ ಪ್ರಯೋಜನಕಾರಿ ಸಹಕಾರವನ್ನು ಉತ್ತೇಜಿಸುತ್ತಿದ್ದೇವೆ.  ನಾವು ಉತ್ತೇಜಕ ಫಲಿತಾಂಶಗಳನ್ನು ನೋಡುತ್ತಿದ್ದೇವೆ.  ಅಂತರ್-ಸಂಪರ್ಕಿತ ಹಸಿರು ಗ್ರಿಡ್‌ಗಳ ದೃಷ್ಟಿಯನ್ನು ಅರಿತುಕೊಳ್ಳುವುದು ರೂಪಾಂತರಗೊಳ್ಳಬಹುದು.  ಇದು ನಮಗೆಲ್ಲರಿಗೂ ನಮ್ಮ ಹವಾಮಾನ ಗುರಿಗಳನ್ನು ಪೂರೈಸಲು, ಹಸಿರು ಹೂಡಿಕೆಯನ್ನು ಉತ್ತೇಜಿಸಲು ಮತ್ತು ಲಕ್ಷಾಂತರ ಹಸಿರು ಉದ್ಯೋಗಗಳನ್ನು ಸೃಷ್ಟಿಸಲು ಅನುವು ಮಾಡಿಕೊಡುತ್ತದೆ.  ನಾನು ನಿಮ್ಮೆಲ್ಲರನ್ನೂ  ''ಒಂದು ಸೂರ್ಯ, ಒಂದು ಜಗತ್ತು, ಅಂತಾರಾಷ್ಟ್ರೀಯ ಸೌರ ಒಕ್ಕೂಟದ ಒಂದು ಗ್ರಿಡ್" ಎನ್ನುವ ಗ್ರೀನ್ ಗ್ರಿಡ್ಸ್ ಉಪಕ್ರಮಕ್ಕೆ ಸೇರಲು ಆಹ್ವಾನಿಸುತ್ತೇನೆ 

 ಸ್ನೇಹಿತರೇ,

 ನಿಮ್ಮ ಸುತ್ತಮುತ್ತಲಿನ ಕಾಳಜಿ ನೈಸರ್ಗಿಕವಾಗಿರಬಹುದು.  ಅದು ಸಾಂಸ್ಕೃತಿಕವೂ ಆಗಿರಬಹುದು.  ಭಾರತದಲ್ಲಿ, ಇದು ನಮ್ಮ ಸಾಂಪ್ರದಾಯಿಕ ಬುದ್ಧಿವಂತಿಕೆಯ ಒಂದು ಭಾಗವಾಗಿದೆ.  ಮತ್ತು ಅಲ್ಲಿಯೇ ಮಿಷನ್ ಲೈಫ್ ತನ್ನ ಶಕ್ತಿಯನ್ನು ಪಡೆಯುತ್ತದೆ.  ಪರಿಸರಕ್ಕಾಗಿ ಜೀವನಶೈಲಿಯು ನಮ್ಮಲ್ಲಿ ಪ್ರತಿಯೊಬ್ಬರನ್ನು ಹವಾಮಾನ ಚಾಂಪಿಯನ್ ಗಳಾಗಿ ಮಾಡುತ್ತದೆ.

 ಸ್ನೇಹಿತರೇ,

 ನಾವು ಹೇಗೆ ಪರಿವರ್ತನೆಯಾಗಿದ್ದರೂ, ನಮ್ಮ ಆಲೋಚನೆಗಳು ಮತ್ತು ಕಾರ್ಯಗಳು ಯಾವಾಗಲೂ ನಮ್ಮ ''ಒಂದು ಭೂಮಿ''ಯನ್ನು ಸಂರಕ್ಷಿಸಲು ಸಹಾಯ ಮಾಡಬೇಕು, ನಮ್ಮ ''ಒಂದು ಕುಟುಂಬದ'' ಹಿತಾಸಕ್ತಿಗಳನ್ನು ರಕ್ಷಿಸಬೇಕು ಮತ್ತು ಹಸಿರು ಉಪಕ್ರಮಗಳು ''ಒಂದು ಉಜ್ವಲ ಭವಿಷ್ಯದ'' ಕಡೆಗೆ ಸಾಗಬೇಕು.  ನಿಮ್ಮ ಚರ್ಚೆಗಳಲ್ಲಿ ನೀವು ಯಶಸ್ವಿಯಾಗಬೇಕೆಂದು ನಾನು ಬಯಸುತ್ತೇನೆ. 

 
ನಿಮ್ಮೆಲ್ಲರಿಗೂ ಧನ್ಯವಾದಗಳು!


 ನಮಸ್ಕಾರ!

 

  • कृष्ण सिंह राजपुरोहित भाजपा विधान सभा गुड़ामा लानी November 21, 2024

    जय श्री राम 🚩 वन्दे मातरम् जय भाजपा विजय भाजपा
  • Devendra Kunwar October 08, 2024

    BJP
  • दिग्विजय सिंह राना September 20, 2024

    हर हर महादेव
  • JBL SRIVASTAVA May 27, 2024

    मोदी जी 400 पार
  • Vaishali Tangsale February 12, 2024

    🙏🏻🙏🏻🙏🏻
  • ज्योती चंद्रकांत मारकडे February 11, 2024

    जय हो
  • ज्योती चंद्रकांत मारकडे February 11, 2024

    जय हो
  • RatishTiwari Advocate July 25, 2023

    भारत माता की जय जय जय
  • Ravi Shankar July 25, 2023

    जय हिन्द जय भारत 🇮🇳🇮🇳
  • RAJBHARTI PRAJAPATI July 24, 2023

    जयति जननी, भगवती वशुधाम समर्पयामी।
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Indian banks outperform global peers in digital transition, daily services

Media Coverage

Indian banks outperform global peers in digital transition, daily services
NM on the go

Nm on the go

Always be the first to hear from the PM. Get the App Now!
...
Terrorism won't break India's spirit: PM Modi
April 24, 2025

India grieves the tragic loss of innocent lives in the Pahalgam terror attack. At the National Panchayati Raj Day event in Madhubani, Bihar, PM Modi led the nation in mourning, expressing profound sorrow and outrage. A two-minute silence was observed to honour the victims, with the entire nation standing in solidarity with the affected families.

In a powerful address in Madhubani, Bihar, PM Modi gave a clarion call for justice, unity, resilience and India’s undying spirit in the face of terrorism. He condemned the recent terrorist attack in Pahalgam, Jammu & Kashmir, and outlined a resolute response to those threatening India’s sovereignty and spirit.

Reflecting on the tragic attack on April 22 in Pahalgam, PM Modi expressed profound grief, stating, “The brutal killing of innocent citizens has left the entire nation in pain and sorrow. From Kargil to Kanyakumari, our grief and outrage are one.” He extended solidarity to the affected families, assuring them that the government is making every effort to support those injured and under treatment. The PM underscored the unified resolve of 140 crore Indians against terrorism. “This was not just an attack on unarmed tourists but an audacious assault on India’s soul,” he declared.

With unwavering determination, PM Modi vowed to bring the perpetrators to justice, asserting, “Those who carried out this attack and those who conspired it will face a punishment far greater than they can imagine. The time has come to wipe out the remnants of terrorism. India’s willpower will crush the backbone of the masters of terrorism.” He further reinforced India’s global stance, stating from Bihar’s soil, “India will identify, track, and punish every terrorist, their handlers, and their backers, pursuing them to the ends of the earth. Terrorism will not go unpunished, and the entire nation stands firm in this resolve.”

PM Modi also expressed gratitude to the various countries, their leaders and the people who have stood by India in this hour of grief, emphasizing that “everyone who believes in humanity is with us.”