2016ರ ಶ್ರೇಣಿಯ ಐ.ಎ.ಎಸ್ ಅಧಿಕಾರಿಗಳು, ಸಹಾಯಕ ಕಾರ್ಯದರ್ಶಿಗಳ ವಿದಾಯ ಸಭೆಯ ಅಂಗವಾಗಿ , ಕೃಷಿ ಆದಾಯ ಹೆಚ್ಚಳ, ಮಣ್ಣಿನ ಆರೋಗ್ಯ ಕಾರ್ಡ್ ಕುಂದುಕೊರತೆಗಳ ಪರಿಹಾರ, ನಾಗರೀಕ ಸೇವೆಗಳು, ಇಂಧನ ಕ್ಷೇತ್ರ ಸುಧಾರಣೆ , ಪ್ರವಾಸಿಗರ ಸೌಲಭ್ಯಗಳು, ಇ- ಹರಾಜುಗಳು, ಮತ್ತು ಸ್ಮಾರ್ಟ್ ನಗರಾಭಿವೃದ್ಧಿ ಪರಿಹಾರಗಳು ಸೇರಿದಂತೆ ಆಯ್ದ 8 ವಿಷಯಗಳನ್ನು ಆಧರಿಸಿದ ಮಾಹಿತಿ-ವಿವರಣೆಗಳನ್ನು  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ  ಅವರಿಗೆ ನೀಡಿದರು. 
|
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಸಹಾಯಕ ಕಾರ್ಯದರ್ಶಿಗಳ ಕಾರ್ಯಕ್ರಮವು ಅತ್ಯಂತ ಕಿರಿಯ ಅಧಿಕಾರಿಗಳಿಗೆ ಪರಸ್ಪರ ಬೆರೆಯಲು ಅವಕಾಶ ನೀಡುತ್ತದೆ. ಕಾರ್ಯಕ್ರಮದ ಅಂಗವಾಗಿ ವಿವಿಧ ಸಚಿವಾಲಯಗಳ ಒಡನಾಟದ ಮೂಲಕ ತಾವು ಗಳಿಸಿದ ಅನುಭವಗಳಲ್ಲಿ ಅತ್ಯುತ್ತಮವಾದವುಗಳನ್ನು ಸ್ವೀಕರಿಸಿ ಅಳವಡಿಸಿಕೊಳ್ಳಲು ಯುವ ಅಧಿಕಾರಿಗಳಿಗೆ ಪ್ರಧಾನಮಂತ್ರಿ ಅವರು ಪ್ರೇರೇಪಿಸಿದರು. ನಿಮ್ಮ ವೃತ್ತಿ ಜೀವನದಲ್ಲಿ ನೀವು ಯಾವುದೇ ಹುದ್ದೆಯಲ್ಲಿ ಸೇವೆ ಸಲ್ಲಿಸಬಹುದು, ಆದರೆ  ಸರಕಾರದಿಂದ ಜನರ ನಿರೀಕ್ಷೆಯನ್ನು ಗಮನದಲ್ಲಿಟ್ಟು ಕಾರ್ಯನಿರ್ವಹಿಸಲು ತಿಳಿಸಿದರು. ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಆ ನಿರೀಕ್ಷೆಗಳನ್ನು ಪೂರ್ತಿಗೊಳಿಸುವ ಪ್ರಯತ್ನಮಾಡಬೇಕು ಎಂದು ಪ್ರಧಾನಮಂತ್ರಿ ಅಧಿಕಾರಿಗಳಿಗೆ  ಹುರಿದುಂಬಿಸಿದರು.
|

 

|
ತಮ್ಮ ಕರ್ತವ್ಯದ ವೇಳೆ, ಯಾವ ಜನತೆಗಾಗಿ ಸೇವೆ ಸಲ್ಲಿಸುತ್ತಾರೋ ಮತ್ತು ಅವರ ಸುತ್ತುಮುತ್ತಲ ಜನರೊಂದಿಗೆ ಕೂಡಾ ಅಧಿಕಾರಿಗಳು ಸಂಪರ್ಕವನ್ನು ವೃದ್ಧಿಸಬೇಕೆಂದು ಪ್ರಧಾನಮಂತ್ರಿ ಅವರು ಈ ಅಧಿಕಾರಿಗಳಿಗೆ ತಿಳಿಸಿದರು. ಜನರೊಂದಿಗೆ ನಿಕಟ ಬಾಂಧವ್ಯಗಳು ತಮ್ಮ ಉದ್ದೇಶಿತ ಕೆಲಸ-ಕಾರ್ಯಗಳಲ್ಲಿ ಮತ್ತು ಉದ್ಧೇಶಗಳ ಯಶಸ್ಸಿನ ಮೂಲಾಧಾರಗಳಲ್ಲಿ ಒಂದಾಗಿದೆ.
|
ಯುವ ಅಧಿಕಾರಿಗಳು ನೀಡಿದ ವಿವರಣೆಗೆ ಪ್ರಧಾನಮಂತ್ರಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. 
Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
Terror Will Be Treated As War: PM Modi’s Clear Warning to Pakistan

Media Coverage

Terror Will Be Treated As War: PM Modi’s Clear Warning to Pakistan
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11 ಮೇ 2025
May 11, 2025

PM Modi’s Vision: Building a Stronger, Smarter, and Safer India